ಬೆಂಗಳೂರು: ಪತ್ನಿ ಪಾರ್ವತಿಗೆ ಸೈಟ್ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್, ಲೋಕಾಯುಕ್ತ ತನಿಖೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬಂದಿಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿ ಸಿಬಿಐಗೆ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.ಮುಡಾ ಕೇಸ್ ನಲ್ಲಿ ಮೂರು ಪ್ರಶ್ನೆಗಳನ್ನು ನಿಗದಿಪಡಿಸಿರುವ ಹೈಕೋರ್ಟ್, ಲೋಕಾಯುಕ್ತ ಪೊಲೀಸರು ಸ್ವತಂತ್ರ ತನಿಖಾ ಸಂಸ್ಥೆಯೇ ಎಂಬ ಪ್ರಶ್ನೆಗೆ ಉತ್ತರಿಸಿದೆ. ಲೋಕಾಯುಕ್ತ ಪೊಲೀಸರು ಸ್ವತಂತ್ರ ತನಿಖಾ ಸಂಸ್ಥೆ ಎಂದ ಹೈಕೋರ್ಟ್ ಪ್ರಕರಣವನ್ನು ಸಿಬಿಐ ಗೆ ವಹಿಸಲು ನಿರಾಕರಿಸಿದೆ.

 

Source: Vartha Bharathi